Skip to product information
1 of 1

Sadguru

ಆಸೆಯೇ ಅನಂತ

ಆಸೆಯೇ ಅನಂತ

Publisher - ಜೈಕೋ ಪಬ್ಲಿಕೇಷನ್ಸ್

Regular price Rs. 165.00
Regular price Rs. 165.00 Sale price Rs. 165.00
Sale Sold out
Shipping calculated at checkout.

- Free Shipping above ₹1,000

- Cash on Delivery (COD) Available

Pages -

Type -

ನಮ್ಮ ಬದುಕಿನಲ್ಲಿ ಉದ್ಭವಿಸುವ ಎಲ್ಲ ಹಿರಿಯ-ಕಿರಿಯ ದುಃಖ ದುಮಾನಗಳಿಗೆ ನಮ್ಮ ಆಸೆಗಳೇ ಕಾರಣ, ಆದುದರಿಂದ ನಾವು ಆಸೆಗಳನ್ನು ಬಿಡಬೇಕು ಎಂದು ಅನೇಕ ಮತಧರ್ಮಗಳು ಹೇಳುತ್ತಾ ಬಂದಿವೆ. ಈ ಅಭಿಪ್ರಾಯ ಎಷ್ಟರಮಟ್ಟಿಗೆ ಬೇರೂರಿದೆಯೆಂದರೆ, ಆಸೆಗಳನ್ನು ಬಿಟ್ಟುಬಿಡುವುದೇ ಒಂದು ಮಹತ್ಸಾಧನೆ ಎನ್ನುವಂತಾಗಿದೆ. ಆಸೆಯೇ ದುಃಖಕ್ಕೆ ಮೂಲ ಎಂದು ಗೌತಮ ಬುದ್ಧ ಸಾರಿಹೇಳಿದನೆಂದೂ ಜನ ನಂಬುತ್ತಾರೆ.

ಇದಕ್ಕೆ ಸದ್ಗುರುವಿನ ಪ್ರತಿಕ್ರಿಯೆ - “ಆಸೆಯೇ ದುಃಖಕ್ಕೆ ಮೂಲ” ಎಂಬಂತಹ ತಿಳಿಗೇಡಿತನದ ಮಾತನ್ನು ಗೌತಮ ಬುದ್ಧನು ಹೇಳಿರಲು ಸಾಧ್ಯವಿಲ್ಲ. ಆಸೆಗಳನ್ನು ಬಿಡಬೇಕು ಎನ್ನುವುದೂ ಒಂದು ಆಸೆ ತಾನೆ! ಆಸೆ-ಬಯಕೆಗಳಿಲ್ಲದೆ ಬದುಕೇ ಸಾಧ್ಯವಿಲ್ಲ, ಆಸೆಗಳನ್ನೇ ಬಿಟ್ಟುಬಿಡುವುದು ಮರಣಕ್ಕೆ ಸಮಾನ, ಜೀವನಕ್ಕೆ ವಿರುದ್ಧವಾದುದು ಎನ್ನುತ್ತಾರೆ ಸದ್ಗುರು.

ಸದ್ಗುರುವಿನ ಅಭಿಮತ - ಆಸೆಗಳನ್ನು ಇರಿಸಿಕೊಳ್ಳಿ, ಆದರೆ ಇದರಲ್ಲಿ ಕಂಜೂಸ್‌ತನ ಬೇಡ, ಎಲ್ಲದಕ್ಕೂ ಆಸೆಪಡಿ, ಆಸೆಗಳನ್ನೂ ಇಡೇರಿಸಿಕೊಳ್ಳುವ ಪ್ರಯತ್ನದಲ್ಲಿ ಬೆಳೆಯಿರಿ, ಬೆಳೆಯುತ್ತ ಆಸೆಗಳನ್ನು ವಿಸ್ತರಿಸುತ್ತಾ ವಿಸ್ತರಿಸುತ್ತಾ ಅನಂತವನ್ನೇ ಆಶಿಸಿ ಈ ಆಸೆಯನ್ನು ಈಡೇರಿಸಿಕೊಳ್ಳುವುದೇ ಜೀವನ. ಆಸೆಯೇ ಅನಂತ.

ಸದ್ಗುರುವಿನ ಈ ವಿಚಾರಧಾರೆ ಮೊದಲಬಾರಿಗೆ ತಮಿಳಿನ 'ಆನಂದ ವಿಕಟನ್ ವಾರಪತ್ರಿಕೆಯಲ್ಲಿ ನಾಲ್ಕು ವರ್ಷ ಕಾಲ ಜನಪ್ರಿಯ ಧಾರಾವಾಹಿಯಾಗಿ ಮೂಡಿಬಂದಿತು. ನಂತರ ಕನ್ನಡದ ಸುಧಾ ವಾರಪತ್ರಿಕೆಯಲ್ಲೂ ಪ್ರಕಟವಾಯಿತು. ಅದನ್ನು ಇಲ್ಲಿ ಪುಸ್ತಕ ರೂಪದಲ್ಲಿ ಪ್ರಸ್ತುತಗೊಳಿಸಲಾಗಿದೆ.


View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)