1
/
of
1
Ananda Vingakara
ಅಕಾಲ ಮಳೆ ಸುರಿದಾಗಿನ ಕಥೆ
ಅಕಾಲ ಮಳೆ ಸುರಿದಾಗಿನ ಕಥೆ
Publisher - ನವಕರ್ನಾಟಕ ಪ್ರಕಾಶನ
Regular price
Rs. 90.00
Regular price
Rs. 90.00
Sale price
Rs. 90.00
Unit price
/
per
Shipping calculated at checkout.
- Free Shipping Above ₹250
- Cash on Delivery (COD) Available
Pages - 141
Type - Paperback
Couldn't load pickup availability
ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣ ದಿಂದಾಗಿ ನಗರ-ಹಳ್ಳಿಗಳೂ ತಮ್ಮ ಅಸ್ತಿತ್ವವನ್ನೇ ಕಳೆದು ಕೊಳ್ಳುತ್ತಿವೆ. ಆದರೂ ಮಳೆಯನ್ನೇ ಅವಲಂಬಿಸಿಕೊಂಡಿರುವ ಚಿಕ್ಕ ರೈತರ ಬದುಕಿನಲ್ಲಿ ಅಂಥ ಬದಲಾವಣೆ ಏನೂ ಆಗಲಿಲ್ಲ. ಅವನ ಆಶೆ-ಆಕಾಂಕ್ಷೆಗಳೆಲ್ಲ ಇಂದಿಗೂ ಮಳೆಯನ್ನೂ, ಫಸಲನ್ನೂ ಅವಲಂಬಿಸಿದೆ. ಹೆಂಡತಿ ಮಕ್ಕಳ ಹೊಟ್ಟೆಗೆ, ಬಟ್ಟೆಗೆ, ಶಿಕ್ಷಣಕ್ಕೆ ನಾಲ್ಕು ದುಡ್ಡು ಉಳಿಯಲಿ ಎನ್ನುವುದೇ ಅವನ ಕನಸು. ಆದರೆ ಕಳೆದ ಕೆಲವು ವರ್ಷಗಳಲ್ಲಿ ದೇಶದ ಆರ್ಥಿಕ ವ್ಯವಸ್ಥೆಯೇ ಬದಲಾಗಿದೆ. ಹವಾಮಾನ, ಋತುಮಾನ ಎಲ್ಲವೂ ಲಯ ತಪ್ಪಿದೆ. ಅದರ ಪರಿಣಾಮ ಕೃಷಿಯ ಮೇಲಾಗುತ್ತಿದೆ. ನಿಸರ್ಗದ ಪ್ರಹಾರದಿಂದ ರೈತ ಹತಬಲನಾಗುತ್ತಿದ್ದಾನೆ. ಮನೆ ಹೊಲಕ್ಕಾಗಿ ಸಾಲ ಮಾಡಬೇಕಾಗುತ್ತದೆ. ಸಾಹುಕಾರರಿಂದ, ಸರಕಾರದಿಂದ ಪಡೆದ ಸಾಲವೇ ಉರುಳಾಗಿ ಹೊಲ ಕಳಕೊಳ್ಳುವ ಸ್ಥಿತಿ ಬಂದು ರೈತನ ಕನಸು ನುಚ್ಚು ನೂರಾಗುತ್ತದೆ. ಮನುಷ್ಯ ಜೀವನದ ಅನಿಶ್ಚಿತತೆ, ಹತಬಲವನ್ನು ಕೃತಿಯಲ್ಲಿ ಹಿಡಿದಿಡಲಾಗಿದೆ... ಒಂದು ರೈತ ಕುಟುಂಬದ ಮೇಲೆ ಬೀಳುವ ಆಘಾತ, ಕುಗ್ಗುವ ಆಯುಷ್ಯ, ಉದ್ದಸ್ತಗೊಳ್ಳುವ ಕನಸು, ಇದೆಲ್ಲವನ್ನೂ ನಮ್ಮ ಮರಾಠಿ ಲೇಖಕ ಆನಂದ ಎಂಗಕರ ತುಂಬ ಪರಿಣಾಮಕಾರಿಯಾಗಿ ಚಿತ್ರಿಸಿದ್ದಾರೆ. ಆತ್ಮಹತ್ಯೆಯು ಕಾದಂಬರಿಯ ಕೇಂದ್ರಬಿಂದುವಾದರೂ ಮಾನವೀಯತೆ, ಬದುಕಿನ ವಿವಿಧ ಮಗ್ಗಲುಗಳು ಸೂಚ್ಯವಾಗಿ ತೆರೆದುಕೊಳ್ಳುತ್ತವೆ.
Share

Subscribe to our emails
Subscribe to our mailing list for insider news, product launches, and more.