ಡಾ. ಗಜಾನನ ಶರ್ಮ
Publisher: ಅಂಕಿತ ಪುಸ್ತಕ
Regular price
Rs. 395.00
Regular price
Rs. 395.00
Sale price
Rs. 395.00
Unit price
per
Shipping calculated at checkout.
Couldn't load pickup availability
ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ "ಚೆನ್ನಭೈರಾದೇವಿ". ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ, ಕರಿಮೆಣಸಿನ ರಾಣಿಯ ಅಕಳಂಕ ಚರಿತೆ ಈ ಕೃತಿ. ಸಾಹಿತಿ ಜೋಗಿಯವರು ಈ ಕೃತಿಗೆ ಬೆನ್ನುಡಿ ಬರೆದು,"ಚೆನ್ನಭೈರಾದೇವಿ"ಯ ಬದುಕಿನ ಅಪರೂಪದ ಘಟನೆಗಳನ್ನು ತಂದು ಕಾದಂಬರಿಕಾರರು ನಮ್ಮ ಮುಂದಿಟ್ಟಿದ್ದಾರೆ. ಪುಟಪುಟದಲ್ಲೂ ರೋಮಾಂಚನಗೊಳಿಸುವ ವಿವರಗಳ ಜತೆಗೇ ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. ಇತ್ತಿಚಿನ ಮೂರು ನಾಲ್ಕು ದಶಕಗಳಲ್ಲಿ ನಾನು ಇಷ್ಟು ಸಮೃದ್ಧವಾದ ಪ್ರಾಮಾಣಿಕವಾದ ಐತಿಹಾಸಿಕ ಕಾದಂಬರಿಯನ್ನು ಓದಿಲ್ಲʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.
