1
/
of
1
Girimane Shyamarao
ಚಿಂತನ
ಚಿಂತನ
Publisher - ಗಿರಿಮನೆ ಪ್ರಕಾಶನ
Regular price
Rs. 110.00
Regular price
Rs. 110.00
Sale price
Rs. 110.00
Unit price
/
per
Shipping calculated at checkout.
- Free Shipping Above ₹300
- Cash on Delivery (COD) Available
Pages -
Type -
Couldn't load pickup availability
'ಯಾವುದು ಸರಿ? ಯಾವುದು ತಪ್ಪು? ಏನು ಮಾಡಿದ್ದರಿಂದ ಏನಾಗುತ್ತದೆ? ಯಾರ ಅಂತರಂಗದಲ್ಲಿ ಯಾವೆಲ್ಲಾ ವಿಷಯ ಹುದುಗಿರುತ್ತದೆ? ಈ ಜಗತ್ತು ಯಾಕೆ ಹೀಗಿದೆ?' ಇತ್ಯಾದಿ ಪ್ರಶ್ನೆಗಳಿಗೆ ಸರಿ ಉತ್ತರ ಕಂಡುಕೊಳ್ಳಲು ಸತ್ಯ, ವಾಸ್ತವ ಮತ್ತು ತರ್ಕದೊಂದಿಗೆ ಮಾಡುವ ವಿಶ್ಲೇಷಣೆಯೇ ಚಿಂತನ. ಚಿಂತೆ ಮನಸ್ಸನ್ನು ಕುಗ್ಗಿಸಿದರೆ ಚಿಂತನೆ ಮನಸ್ಸನ್ನು ಹಿಗ್ಗಿಸಿ ವಿಚಾರಶೀಲರನ್ನಾಗಿಸುತ್ತದೆ.
ಮನುಷ್ಯರ ಗುಣಸ್ವಭಾವಗಳು ವಿಚಿತ್ರ, ನಾವು ನಮ್ಮದು ಸರಿ, ಇನ್ನೊಬ್ಬರದು ತಪ್ಪು ಎನ್ನುತ್ತೇವೆ. ಅವರೂ ಹಾಗೇ ಅನ್ನುತ್ತಾರೆ. “ಎಲ್ಲರಲ್ಲಿರುವಂತೆ ನಮ್ಮಲ್ಲೂ ದೋಷಗಳಿರುತ್ತವೆ' ಎಂಬ ಸತ್ಯ ತಿಳಿಯುವುದು ಕೆಲವರಿಗೆ ಮಾತ್ರ! ನಮ್ಮ ಮನಸ್ಸು ತಾನಾಗಿ ಕೆಡುವುದಕ್ಕಿಂತ ಆಚೀಚೆಯವರು ಕೆಡಿಸುವುದೇ ಜಾಸ್ತಿ. ಹುಟ್ಟುಗುಣ ಮತ್ತು ಸಂದರ್ಭಕ್ಕನುಸಾರವಾಗಿ ಯಾರ ಮನಸ್ಸು ಹೇಗೆ ವರ್ತಿಸುತ್ತದೆ? ಎಂದು ತಿಳಿದಿದ್ದರೆ ನಮ್ಮ ಮನಸ್ಸನ್ನು ಕೆಡಿಸಿಕೊಳ್ಳುವ ಅವಶ್ಯಕತೆ ಬರುವುದಿಲ್ಲ.
ನಾಲ್ಕು ಸಾಲುಗಳ ಈ ಚಿಂತನಗಳಲ್ಲಿ ಸರಿ-ತಪ್ಪುಗಳ ವಿಶ್ಲೇಷಣೆ, ಸಾಮಾನ್ಯವಾಗಿ ಜನ ನಡೆದುಕೊಳ್ಳುವ ರೀತಿ, ಅಂತರಂಗದ ನಾನಾ ಭಾವಗಳನ್ನು ಹೊರತೆಗೆದು ನೋಡುವ ಪ್ರಯತ್ನ ಇದೆ. ಜೀವನದ ಸತ್ಯ ಕಹಿಸತ್ಯ, ಜನರ ವಿಧ ವಿಧವಾದ ಮನಸ್ಸು, ಗುಣ-ಸ್ವಭಾವ, ನಡವಳಿಕೆಗಳ ಪರಿಚಯ ಮಾಡಿಕೊಡಲು ನನ್ನಿಂದಾದಷ್ಟು ಯತ್ನಿಸಿದ್ದೇನೆ. ಎಲ್ಲಕ್ಕಿಂತ ಮುಖ್ಯವಾಗಿ ಆಷಾಢಭೂತಿಗಳ ಸೋಗನ್ನು ಕಳಚುವ ಸಂಗತಿಗಳಿವೆ. ಹದಿನೆಂಟು ಮಾತ್ರೆಗಳ ನಾಲ್ಕು ಸಾಲುಗಳಲ್ಲಿ ದೊಡ್ಡ ವಿಷಯಗಳನ್ನು ಚಿಕ್ಕದಾಗಿ ಹೇಳುವ ತಂತ್ರ ಅಳವಡಿಸಿದ್ದರಿಂದ ಅವನ್ನು ಎಷ್ಟು ಬೇಕಾದರೂ ಹಿಗ್ಗಿಸಬಹುದು. ಒಳಾರ್ಥ, ಭಾವಾರ್ಥ, ವ್ಯಂಗ್ಯಗಳಿಂದ ಕೂಡಿರುವುದರಿಂದ ನಿಜಾರ್ಥ ಹೊಳೆಯುವಾಗ ನಿಧಾನವಾಗಬಹುದು. ವಿಷಯ, ಓದುಗರನ್ನು ಚಿಂತನೆಗೆ ಹಚ್ಚಿದರೆ ಬರೆದಿದ್ದು ಸಾರ್ಥಕ.
ನಿಮ್ಮವ ಗಿರಿಮನೆ ಶ್ಯಾಮರಾವ್
ಮನುಷ್ಯರ ಗುಣಸ್ವಭಾವಗಳು ವಿಚಿತ್ರ, ನಾವು ನಮ್ಮದು ಸರಿ, ಇನ್ನೊಬ್ಬರದು ತಪ್ಪು ಎನ್ನುತ್ತೇವೆ. ಅವರೂ ಹಾಗೇ ಅನ್ನುತ್ತಾರೆ. “ಎಲ್ಲರಲ್ಲಿರುವಂತೆ ನಮ್ಮಲ್ಲೂ ದೋಷಗಳಿರುತ್ತವೆ' ಎಂಬ ಸತ್ಯ ತಿಳಿಯುವುದು ಕೆಲವರಿಗೆ ಮಾತ್ರ! ನಮ್ಮ ಮನಸ್ಸು ತಾನಾಗಿ ಕೆಡುವುದಕ್ಕಿಂತ ಆಚೀಚೆಯವರು ಕೆಡಿಸುವುದೇ ಜಾಸ್ತಿ. ಹುಟ್ಟುಗುಣ ಮತ್ತು ಸಂದರ್ಭಕ್ಕನುಸಾರವಾಗಿ ಯಾರ ಮನಸ್ಸು ಹೇಗೆ ವರ್ತಿಸುತ್ತದೆ? ಎಂದು ತಿಳಿದಿದ್ದರೆ ನಮ್ಮ ಮನಸ್ಸನ್ನು ಕೆಡಿಸಿಕೊಳ್ಳುವ ಅವಶ್ಯಕತೆ ಬರುವುದಿಲ್ಲ.
ನಾಲ್ಕು ಸಾಲುಗಳ ಈ ಚಿಂತನಗಳಲ್ಲಿ ಸರಿ-ತಪ್ಪುಗಳ ವಿಶ್ಲೇಷಣೆ, ಸಾಮಾನ್ಯವಾಗಿ ಜನ ನಡೆದುಕೊಳ್ಳುವ ರೀತಿ, ಅಂತರಂಗದ ನಾನಾ ಭಾವಗಳನ್ನು ಹೊರತೆಗೆದು ನೋಡುವ ಪ್ರಯತ್ನ ಇದೆ. ಜೀವನದ ಸತ್ಯ ಕಹಿಸತ್ಯ, ಜನರ ವಿಧ ವಿಧವಾದ ಮನಸ್ಸು, ಗುಣ-ಸ್ವಭಾವ, ನಡವಳಿಕೆಗಳ ಪರಿಚಯ ಮಾಡಿಕೊಡಲು ನನ್ನಿಂದಾದಷ್ಟು ಯತ್ನಿಸಿದ್ದೇನೆ. ಎಲ್ಲಕ್ಕಿಂತ ಮುಖ್ಯವಾಗಿ ಆಷಾಢಭೂತಿಗಳ ಸೋಗನ್ನು ಕಳಚುವ ಸಂಗತಿಗಳಿವೆ. ಹದಿನೆಂಟು ಮಾತ್ರೆಗಳ ನಾಲ್ಕು ಸಾಲುಗಳಲ್ಲಿ ದೊಡ್ಡ ವಿಷಯಗಳನ್ನು ಚಿಕ್ಕದಾಗಿ ಹೇಳುವ ತಂತ್ರ ಅಳವಡಿಸಿದ್ದರಿಂದ ಅವನ್ನು ಎಷ್ಟು ಬೇಕಾದರೂ ಹಿಗ್ಗಿಸಬಹುದು. ಒಳಾರ್ಥ, ಭಾವಾರ್ಥ, ವ್ಯಂಗ್ಯಗಳಿಂದ ಕೂಡಿರುವುದರಿಂದ ನಿಜಾರ್ಥ ಹೊಳೆಯುವಾಗ ನಿಧಾನವಾಗಬಹುದು. ವಿಷಯ, ಓದುಗರನ್ನು ಚಿಂತನೆಗೆ ಹಚ್ಚಿದರೆ ಬರೆದಿದ್ದು ಸಾರ್ಥಕ.
ನಿಮ್ಮವ ಗಿರಿಮನೆ ಶ್ಯಾಮರಾವ್
Share

Subscribe to our emails
Subscribe to our mailing list for insider news, product launches, and more.