Skip to product information
1 of 1

Dr. Sham. Ba. Jois

ಎಡೆಗಳು ಹೇಳುವ ಕಂನಾಡ ಕತೆ

ಎಡೆಗಳು ಹೇಳುವ ಕಂನಾಡ ಕತೆ

Publisher - ಶಂಬಾ ವಿಚಾರ ವೇದಿಕೆ

Regular price Rs. 75.00
Regular price Rs. 75.00 Sale price Rs. 75.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages -

Type -

Gift Wrap
Gift Wrap Rs. 15.00
ನಾಡಿನ ಜನಗಳಿಗೆ ತಮ್ಮ ನಾಡುನುಡಿಯಲ್ಲಿ ಹೆಮ್ಮೆಹಿಗ್ಗುಗಳು ಕಡಿಮೆಯಾಗುವುದು ಆ ನಾಡಿನ ಅಧೋಗತಿಯ ಪೂರ್ವಸಿದ್ಧತೆ. ಇದು ಕಂನಾಡ ಮೊದಲಿಗರಲ್ಲಿ ಎಂದಿನಿಂದಲೇ ನಡೆದುಹೋಗಿತ್ತು. ದೇವಭಾಷೆ, ಧರ್ಮಭಾಷೆ, ರಾಜಭಾಷೆ ಎಂದು ಮು೦ತಾಗಿ ಕ೦ನುಡಿಯಲ್ಲದ ಮಾತಿಗೇ. ಕಾಲಕಾಲಕ್ಕೆ ಮಹತ್ವವು ಬಂದಿತು; ಬಂದಿದೆ. ಕಂನುಡಿ ಗೌಣಸ್ಥಾನದಲ್ಲಿಯೆ ಇರಬೇಕಾಯಿತು. ಅದರ ಫಲವೇ ನಮ್ಮ ಇಂದಿನ ಗೌಣಸ್ಥಿತಿ.

ಜನಗಳಿಗೆ ತಮ್ಮ ನಾಡಿನ, ನುಡಿಯ ನಿಜಸ್ವರೂಪದ ತಿಳುವಳಿಕೆಯು ಈವರೆಗೆ ಅವಶ್ಯವೆನಿಸಿರಲಿಲ್ಲ. 'ಕನ್ನಡ'ವೆಂಬುದು ಮೂಲದಲ್ಲಿ ದೇಶದ ಹೆಸರೂ, ಭಾಷೆಯ ಹೆಸರೂ ಎಂಬುದೂ ಮರೆತುಹೋಗಿತ್ತು! ರಾಮಾ, ಬಶ್ಯಾ ಎಂದು ಬಹಳ ದಿನಗಳಿಂದ ಕರೆಯಿಸಿಕೊಳ್ಳುತ್ತಿದ್ದವನಿಗೆ ರಾಮ, ಬಸವಂತನೆಂದು ಯಾರಾದರೂ ವಾದ ಹೇಳಿದರೂ ಆತನಿಗೆ ತನ್ನ ಹೆಸರು ರಾಮ, ಬಸವ೦ತನೆ೦ದು ಸರಿಯಾಗಿ ಹೇಳಲೂ ಸಂಕೋಚವೆನಿಸುವಂತಾಗಿದೆ ನಮ್ಮ ನಾಡಿಗರ ನಮ್ಮ ಪಾಡು. ನಮ್ಮ ನಾಡು, ನುಡಿಗಳ ಶುದ್ಧ ಅರ್ಥವತ್ತಾದ ರೂಪಗಳನ್ನು ಬಳಸುವುದಕ್ಕೂ ಮನಸ್ಸಿನ ಸಿದ್ಧತೆಯಾಗಬೇಕಾಗಿದೆ ಇನ್ನೂ! ಇಂತಿದು ಆರ್ಯರು ಗೆದ್ದು ಸೋತ, ಕಂನಾಡ ಮೊದಲಿಗರ ಸೋತು ಗೆದ್ದ ಸಂಕ್ಷಿಪ್ತ ಕತೆ. 
View full details