Noushad Jannatt
Publisher - ವೀರಲೋಕ ಬುಕ್ಸ್
Regular price
Rs. 300.00
Regular price
Rs. 300.00
Sale price
Rs. 300.00
Unit price
per
- Free Shipping Above ₹200
- Cash on Delivery (COD) Available
Pages - 254
Type - Paperback
ನೌಶಾದ್ ಜನ್ನತ್
ಕೊಡಗಿನ ಮಡಿಕೇರಿ ಬಳಿಯ ಬೋಯಿಕೇರಿ, ನೌಶಾದ್ ಜನ್ನತ್ ಹುಟ್ಟೂರು. ಸುಂಟಿಕೊಪ್ಪ ಸರಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ಇವರು ಸದ್ಯ ಕುಶಾಲನಗರದಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದಾರೆ. ಜೀವನೋಪಾಯಕ್ಕಾಗಿ ಕೊಡಗಿನ ಗಡಿಯಂಚಿನಲ್ಲಿ ಪಿಠೋಪಕರಣಗಳ ಉದ್ಯಮವನ್ನು ನಡೆಸುತ್ತಿರುವ ನೌಶಾದ್ರವರು, 'ನಮ್ಮ ಕೊಡಗು ತಂಡ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ಅದರ ಮೂಲಕ ಸಂತ್ರಸ್ತರು ಮತ್ತು ಆದಿವಾಸಿಗಳ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡುವುದರ ಜೊತೆಗೆ ಸರಕಾರಿ ಶಾಲೆ ಉಳಿಸಿ ಅಭಿಯಾನವನ್ನು ಕೂಡ ಕೊಡಗಿನಲ್ಲಿ ಪರಿಣಾಮಕಾರಿಯಾಗಿ ಮಾಡುತ್ತಾ ಬಂದಿದ್ದಾರೆ.
ಕಾಲೇಜು ದಿನಗಳಿಂದಲೂ ಸಾಹಿತ್ಯದ ಮೇಲೆ ಅಪಾರ ಒಲವಿದ್ದ ನೌಶಾದ್ ಜನ್ನತ್ರ ಹಲವು ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗಿದೆ. 2020ರಲ್ಲಿ 'ಕಡಮ್ಮಕಲ್ಲು ಎಸ್ಟೇಟ್" ಎಂಬ ಕಿರುಕಾದಂಬರಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅನುದಾನದಡಿಯಲ್ಲಿ ಬರೆದಿದ್ದು, ಈ ಕೃತಿ ಕೊಡಗು ಸಾಹಿತ್ಯವಲಯದಲ್ಲಿ ಹೆಚ್ಚು ಚರ್ಚಿತವಾಗಿ ಬಿಡುಗಡೆಯಾದ ಎರಡು ದಿನದಲ್ಲಿ ಮರುಮುದ್ರಣವಾಗಿತ್ತು. ಕೊಡಗಿನ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಪಟ್ಟಂತೆ ಇವರು 2021ರಲ್ಲಿ ಬರೆದ “ಜಲಪ್ರಳಯ' ಕೃತಿ ಕೂಡ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಚರ್ಚೆಗೆ ಗ್ರಾಸವಾಗಿತ್ತು.
ಕೊಡಗಿನ ಮಡಿಕೇರಿ ಬಳಿಯ ಬೋಯಿಕೇರಿ, ನೌಶಾದ್ ಜನ್ನತ್ ಹುಟ್ಟೂರು. ಸುಂಟಿಕೊಪ್ಪ ಸರಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ಇವರು ಸದ್ಯ ಕುಶಾಲನಗರದಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದಾರೆ. ಜೀವನೋಪಾಯಕ್ಕಾಗಿ ಕೊಡಗಿನ ಗಡಿಯಂಚಿನಲ್ಲಿ ಪಿಠೋಪಕರಣಗಳ ಉದ್ಯಮವನ್ನು ನಡೆಸುತ್ತಿರುವ ನೌಶಾದ್ರವರು, 'ನಮ್ಮ ಕೊಡಗು ತಂಡ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ಅದರ ಮೂಲಕ ಸಂತ್ರಸ್ತರು ಮತ್ತು ಆದಿವಾಸಿಗಳ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡುವುದರ ಜೊತೆಗೆ ಸರಕಾರಿ ಶಾಲೆ ಉಳಿಸಿ ಅಭಿಯಾನವನ್ನು ಕೂಡ ಕೊಡಗಿನಲ್ಲಿ ಪರಿಣಾಮಕಾರಿಯಾಗಿ ಮಾಡುತ್ತಾ ಬಂದಿದ್ದಾರೆ.
ಕಾಲೇಜು ದಿನಗಳಿಂದಲೂ ಸಾಹಿತ್ಯದ ಮೇಲೆ ಅಪಾರ ಒಲವಿದ್ದ ನೌಶಾದ್ ಜನ್ನತ್ರ ಹಲವು ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗಿದೆ. 2020ರಲ್ಲಿ 'ಕಡಮ್ಮಕಲ್ಲು ಎಸ್ಟೇಟ್" ಎಂಬ ಕಿರುಕಾದಂಬರಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅನುದಾನದಡಿಯಲ್ಲಿ ಬರೆದಿದ್ದು, ಈ ಕೃತಿ ಕೊಡಗು ಸಾಹಿತ್ಯವಲಯದಲ್ಲಿ ಹೆಚ್ಚು ಚರ್ಚಿತವಾಗಿ ಬಿಡುಗಡೆಯಾದ ಎರಡು ದಿನದಲ್ಲಿ ಮರುಮುದ್ರಣವಾಗಿತ್ತು. ಕೊಡಗಿನ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಪಟ್ಟಂತೆ ಇವರು 2021ರಲ್ಲಿ ಬರೆದ “ಜಲಪ್ರಳಯ' ಕೃತಿ ಕೂಡ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಚರ್ಚೆಗೆ ಗ್ರಾಸವಾಗಿತ್ತು.