Skip to product information
1 of 1

Dr. G. Purushottam

ಶಾಲೆಯಲ್ಲಿ ಹಿಂದುಳಿಯುವಿಕೆ

ಶಾಲೆಯಲ್ಲಿ ಹಿಂದುಳಿಯುವಿಕೆ

Publisher - ನವಕರ್ನಾಟಕ ಪ್ರಕಾಶನ

Regular price Rs. 40.00
Regular price Rs. 40.00 Sale price Rs. 40.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 48

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00
ಶಿಕ್ಷಣ ಜ್ಞಾನದ ಮೂಲ, ವ್ಯಕ್ತಿತ್ವ ವಿಕಸನದಲ್ಲಿ ಅದರ ಪಾತ್ರ ಮಹತ್ವದ್ದು. ಆದರೆ 'ಆಧುನಿಕ ಶಿಕ್ಷಣದ ಹೆಸರಿನಲ್ಲಿ ನಾಯಿಕೊಡೆಗಳಂತೆ ಹುಟ್ಟಿಕೊಂಡಿರುವ ಶಿಕ್ಷಣ ಸಂಸ್ಥೆಗಳು ಬರೀ ಹಣ ದಾಹವೊಂದನ್ನೇ ತಮ್ಮ ಗುರಿಯಾಗಿಸಿಕೊಂಡು 'ಶಿಕ್ಷಣ'ದ ನಿಜವಾದ ಮೌಲ್ಯವನ್ನು ಕಡೆಗಣಿಸಿವೆ. ಹಾಗೆಯೇ 'ಮನೆ' ಅನ್ನುವುದು ಮಗುವಿಗೆ ಇಂದು 'ಮನೆ'ಯಾಗಿ ಉಳಿದಿಲ್ಲ, ಒತ್ತಡದ, ಭೀತಿಯ, ಬಿಡುವಿಲ್ಲದ ಹೋಂವರ್ಕ್ ಮಾಡುವ ಗೂಡಾಗಿದೆ. ಶಾಲೆಯಿಂದ ಮನೆಗೆ ಬಂದ ಮಗುವಿಗೆ ಅಲ್ಲಿ ನಿಜವಾಗಿ ಹೆತ್ತವರ, ಬಂಧುಗಳ ಪ್ರೀತಿ ಸಿಗಬೇಕು. ಹಾಗಾಗದಿರುವುದೇ ಇಂದಿನ ಬಹುದೊಡ್ಡ ದುರಂತ. ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಹೆತ್ತವರು ಇಬ್ಬರೂ ಸೋಲುತ್ತಿದ್ದಾರೆ. ಜೊತೆಗೆ ಮಗುವೂ ಸೋಲುತ್ತಿದೆ. ಇದಕ್ಕೆ ಮಗುವೊಂದನ್ನೇ ಬೊಟ್ಟುಮಾಡಿ ತೋರಿಸುವುದು ಅದರಲ್ಲಿ ಮತ್ತಷ್ಟು ಕೀಳರಿಮೆ ತುಂಬಲು ಸಹಾಯವಾಗುತ್ತದೆಯಷ್ಟೆ. ಕಲಿಯುವ, ಪರಸ್ಪರ ಪ್ರೀತಿಸುವ, ಮಾನಸಿಕ ಒತ್ತಡದಿಂದ ಹೊರಗುಳಿಯುವ ವಾತಾವರಣವಿಲ್ಲದೆ ಮಗು ಏನನ್ನೂ ಕಲಿಯಲಾರದು. ಇದು 'ಶಾಲೆ' ಮತ್ತು 'ಮನೆ' ಎರಡಕ್ಕೂ ಅನ್ವಯವಾಗುತ್ತದೆ. ಶಾಲೆಯಲ್ಲಿ ಮಕ್ಕಳ ಹಿಂದುಳಿಯುವಿಕೆಗೆ ಮಕ್ಕಳ, ಶಿಕ್ಷಕರ, ಹೆತ್ತವರ ಪಾತ್ರವೇನು ಎಂಬುದನ್ನು ಡಾ|| ಜಿ. ಪುರುಷೋತ್ತಮ ಇಲ್ಲಿ ಚರ್ಚಿಸಿದ್ದಾರೆ ಮತ್ತು ಅವುಗಳಿಗೆ ಪರಿಹಾರವನ್ನೂ ಹೇಳಿದ್ದಾರೆ.

ಡಾ|| ಜಿ. ಪುರುಷೋತ್ತಮ ವಾಕ್ ಶ್ರವಣ ತಜ್ಞರು, ಮೈಸೂರಿನ ಭಾಷಾ ಸಂಸ್ಥಾನದಲ್ಲಿ ಸಂಶೋಧಕರಾಗಿ, ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಅಧ್ಯಾಪಕ, ರೀಡರ್ ಮತ್ತು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರ 'ಆಲಿಕೆ. ಸಮಸ್ಯೆ ಪರಿಹಾರ', 'ಕಲಿಕೆಯ ತೊಂದರೆಗಳು', 'ತೊದಲು ಮಾತಿನ ತೊಂದರೆ ಉಗ್ಗು', 'ಕಿವುಡು ಮಗು ಮಾತಾಡಬಲ್ಲದು' ಮತ್ತು 'ಕಿವಿ ಮೊರೆತ, ತಲೆ ಸುತ್ತು ಮುಂತಾದ ಕೃತಿಗಳನ್ನು ನವಕರ್ನಾಟಕ ಪ್ರಕಟಿಸಿದೆ.
View full details

Talk about your brand

Share information about your brand with your customers. Describe a product, make announcements, or welcome customers to your store.