Asha Raghu
Publisher -
Regular price
Rs. 250.00
Regular price
Rs. 250.00
Sale price
Rs. 250.00
Unit price
per
Shipping calculated at checkout.
- Free Shipping
- Cash on Delivery (COD) Available
Pages -
Type -
Couldn't load pickup availability
ಸುಖ ಪಡೆಯಲೆಂದು ಹೆಣ್ಣು, ಹೊನ್ನು ಮತ್ತು ಮಣ್ಣುಗಳ ಹಿಂದೆ ಬಿದ್ದ ಜೀವಕ್ಕೆ ಆ ಸುಖವು ಎಂದೂ ಮರೀಚಿಕೆಯಾಗಿಯೇ ಉಳಿಯುತ್ತದೆ ಎನ್ನುವುದು ಬರಪರಿಚಿತ ಬೋಧನೆಯಷ್ಟೇ ಅಲ್ಲದೆ, ಮಾನವನ ಚರಿತ್ರೆಯುದ್ದಕ್ಕೂ ಪುನರಾವರ್ತಿತವಾಗಿ ಗೋಚರಿಸುವ ಸತ್ಯ ಕೂಡ. ಇದರ ಇನ್ನೊಂದು ಮಗ್ಗುಲಾಗಿ ನೆಲೆಯಾಗಿರುವ ಮತ್ತೊಂದು ಸತ್ಯವೆಂದರೆ ಆ ಮೂರೂ ಆಸೆಗಳನ್ನು ತೊರೆದ ಚೀದಕ್ಕೆ ಆಹ್ಲಾದಕರ ಆನಂದದ ಜೊತೆಗೆ ಪಾರಮಾರ್ಥಿಕ ಸುಖವೂ ದೊರೆಯುತ್ತದೆ ಎನ್ನುವುದು. ಈ ಎರಡೂ ಸತ್ಯಗಳನ್ನು ನಿರೂಪಿಸಲೆಂದೆ ಆಶಾ ರಘು ಅವರು ಈ ಕಾದಂಬರಿಯನ್ನು ಕಟ್ಟಿಕೊಟ್ಟಿದ್ದಾರೆಯೇ ಎಂಬ ಅನಿಸಿಕ ಓದುಗರಲ್ಲಿ ಮೂಡುವುದು ಖಂಡಿತ. ಅಷ್ಟರಮಟ್ಟಿಗೆ ಈ ಕಾದಂಬರಿಯ ರಚನೆ ಮತ್ತು ಉದ್ದೇಶ ಸಫಲಗೊಂಡಿದೆ ಎನ್ನುವುದೂ ಖಚಿತ.
ಒಂದು ಚಾರಿತ್ರಿಕ ಹಿನ್ನೆಲೆಯಲ್ಲಿ ಬೆಳೆಯುವ ಕಥಾಹಂದರವು, ಅದರ ಪಾತ್ರಗಳ ನೆನಪುಗಳ ಸರಮಾಲೆಯಾಗಿಯೇ ಓದುಗನಿಗೆ ತೆರೆದುಕೊಳ್ಳುವುದು ಈ ಕಾದಂಬರಿಯ ಒಂದು ವಿಶೇಷ. ಬಲವಂತದಲ್ಲಿ ಪ್ರೀತಿಯನ್ನು ಪಡೆಯುವ ಛಲ, ನಿಧಿಯ ಬೇಟೆ, ಆಸ್ತಿಯ ಆಸೆ, ಸಿಂಹಾಸನದ ಉತ್ತರಾಧಿಕಾರಿಯ ಜನ್ಮ ರಹಸ್ಯ, ಮುಂತಾದ ಹೆಗ್ಗುರುತುಗಳಿಗೆ ಓದುಗನನ್ನು ಕಟ್ಟಿಹಾಕಿ, ಆ ಹೆಗ್ಗುರುತುಗಳ ನಕ್ಷೆಯೊಳಗೆ ಕತೆಯನ್ನು ಬೆಳೆಸುತ್ತಾರೆ ಆಶಾ.
ಕಥಾನಾಯಕ ಅತಿಯಾಗಿ ಪ್ರೀತಿಸಿದ್ದ ಬಾಲ್ಯದ ಪ್ರೇಯಸಿಯು ವಿಧಿಯ ಕೈಚಳಕದಿಂದ ದೂರವಾದ ನಂತರ, ಆಕೆಯ ಸ್ಥಾನದಲ್ಲಿ ನೆಲೆಯಾದ ಮತ್ತೊಂದು ಹೆಣ್ಣು ಅವನ ನೈತಿಕ ಸಮತೋಲನವನ್ನು ಸಂಪೂರ್ಣವಾಗಿ ಕದಡಿ ಅವನಲ್ಲಿ 'ಮಾನವ ಸಹಜ' ದುರಾಸೆಗಳನ್ನು ಆಳವಾಗಿ ಬಿತ್ತಿ ಬೆಳೆಸುತ್ತಾಳೆ; ಪರಿಣಾಮವಾಗಿ ತನ್ನದಲ್ಲದ ಮಣ್ಣನ್ನು ಕಬಳಿಸಿ, ಪರರ ಹೊನ್ನಿಗೆ, ಹೆಣ್ಣಿಗೆ ಕೈ ಚಾಚಿದ ಅವನ ಜೀವನ ಕೊನೆಗೆ ಸುಂಟರಗಾಳಿಗೆ ಸಿಕ್ಕ ತರಗೆಲೆಯಂತಾಗುತ್ತದೆ. ಈತನ ಅಮಾನವೀಯ ಕೃತ್ಯಗಳಿಗೆ ಕನ್ನಡಿ ಹಿಡಿಯುವಂತೆ ಸೃಷ್ಟಿಸಲಾಗಿರುವ ಮತ್ತೊಂದು ಪಾತ್ರ ಅಮಾಯಕ ವ್ಯಕ್ತಿ, ತಾನು ವಾರಸುದಾರನಾಗಿದ್ದ ಹೊನ್ನನ್ನೂ, ಅಧಿಕಾರವನ್ನೂ ದೂರ ತಳ್ಳಿ, ಸ್ನೇಹಕ್ಕೆ ಸತ್ಯಕ್ಕೆ ಜೋತುಬಿದ್ದ ಕಾರಣ, ಸರಳವಾದರೂ ಸುಂದರ ಹಾಗ ಆನಂದಮಯ ಜೀವನ ಸಾಗಿಸುತ್ತಾನೆ.
ಒಟ್ಟಿನಲ್ಲಿ, ಸುಖವು ಸುತ್ತಲೂ ಇದ್ದರೂ ಅದನ್ನು ಗ್ರಹಿಸದೆ, ಮತ್ತೆಲ್ಲೊ ಅದು ಸಿಗುತ್ತದೆ ಎಂಬ ಭ್ರಮೆಯ 'ದೂರ ತೀರ'ಕೆ ಕರೆದೊಯ್ಯುವ 'ಮೋಹನ ಮುರುಳಿ'ಯ ಕರೆಗೆ ಬಲಿಯಾಗುವ ಎಲ್ಲ ಮನಸುಗಳಿಗೆ ಎಚ್ಚರಿಕೆಯ ಕರೆಘಂಟೆಯ ಆಶಾ ಅವರ ಈ ಕಾದಂಬರಿ ಮೂಡಿ ಬಂದಿದೆ.
-ಡಾ. ಕೆ.ಎನ್. ಗಣೇಶಯ್ಯ
ಒಂದು ಚಾರಿತ್ರಿಕ ಹಿನ್ನೆಲೆಯಲ್ಲಿ ಬೆಳೆಯುವ ಕಥಾಹಂದರವು, ಅದರ ಪಾತ್ರಗಳ ನೆನಪುಗಳ ಸರಮಾಲೆಯಾಗಿಯೇ ಓದುಗನಿಗೆ ತೆರೆದುಕೊಳ್ಳುವುದು ಈ ಕಾದಂಬರಿಯ ಒಂದು ವಿಶೇಷ. ಬಲವಂತದಲ್ಲಿ ಪ್ರೀತಿಯನ್ನು ಪಡೆಯುವ ಛಲ, ನಿಧಿಯ ಬೇಟೆ, ಆಸ್ತಿಯ ಆಸೆ, ಸಿಂಹಾಸನದ ಉತ್ತರಾಧಿಕಾರಿಯ ಜನ್ಮ ರಹಸ್ಯ, ಮುಂತಾದ ಹೆಗ್ಗುರುತುಗಳಿಗೆ ಓದುಗನನ್ನು ಕಟ್ಟಿಹಾಕಿ, ಆ ಹೆಗ್ಗುರುತುಗಳ ನಕ್ಷೆಯೊಳಗೆ ಕತೆಯನ್ನು ಬೆಳೆಸುತ್ತಾರೆ ಆಶಾ.
ಕಥಾನಾಯಕ ಅತಿಯಾಗಿ ಪ್ರೀತಿಸಿದ್ದ ಬಾಲ್ಯದ ಪ್ರೇಯಸಿಯು ವಿಧಿಯ ಕೈಚಳಕದಿಂದ ದೂರವಾದ ನಂತರ, ಆಕೆಯ ಸ್ಥಾನದಲ್ಲಿ ನೆಲೆಯಾದ ಮತ್ತೊಂದು ಹೆಣ್ಣು ಅವನ ನೈತಿಕ ಸಮತೋಲನವನ್ನು ಸಂಪೂರ್ಣವಾಗಿ ಕದಡಿ ಅವನಲ್ಲಿ 'ಮಾನವ ಸಹಜ' ದುರಾಸೆಗಳನ್ನು ಆಳವಾಗಿ ಬಿತ್ತಿ ಬೆಳೆಸುತ್ತಾಳೆ; ಪರಿಣಾಮವಾಗಿ ತನ್ನದಲ್ಲದ ಮಣ್ಣನ್ನು ಕಬಳಿಸಿ, ಪರರ ಹೊನ್ನಿಗೆ, ಹೆಣ್ಣಿಗೆ ಕೈ ಚಾಚಿದ ಅವನ ಜೀವನ ಕೊನೆಗೆ ಸುಂಟರಗಾಳಿಗೆ ಸಿಕ್ಕ ತರಗೆಲೆಯಂತಾಗುತ್ತದೆ. ಈತನ ಅಮಾನವೀಯ ಕೃತ್ಯಗಳಿಗೆ ಕನ್ನಡಿ ಹಿಡಿಯುವಂತೆ ಸೃಷ್ಟಿಸಲಾಗಿರುವ ಮತ್ತೊಂದು ಪಾತ್ರ ಅಮಾಯಕ ವ್ಯಕ್ತಿ, ತಾನು ವಾರಸುದಾರನಾಗಿದ್ದ ಹೊನ್ನನ್ನೂ, ಅಧಿಕಾರವನ್ನೂ ದೂರ ತಳ್ಳಿ, ಸ್ನೇಹಕ್ಕೆ ಸತ್ಯಕ್ಕೆ ಜೋತುಬಿದ್ದ ಕಾರಣ, ಸರಳವಾದರೂ ಸುಂದರ ಹಾಗ ಆನಂದಮಯ ಜೀವನ ಸಾಗಿಸುತ್ತಾನೆ.
ಒಟ್ಟಿನಲ್ಲಿ, ಸುಖವು ಸುತ್ತಲೂ ಇದ್ದರೂ ಅದನ್ನು ಗ್ರಹಿಸದೆ, ಮತ್ತೆಲ್ಲೊ ಅದು ಸಿಗುತ್ತದೆ ಎಂಬ ಭ್ರಮೆಯ 'ದೂರ ತೀರ'ಕೆ ಕರೆದೊಯ್ಯುವ 'ಮೋಹನ ಮುರುಳಿ'ಯ ಕರೆಗೆ ಬಲಿಯಾಗುವ ಎಲ್ಲ ಮನಸುಗಳಿಗೆ ಎಚ್ಚರಿಕೆಯ ಕರೆಘಂಟೆಯ ಆಶಾ ಅವರ ಈ ಕಾದಂಬರಿ ಮೂಡಿ ಬಂದಿದೆ.
-ಡಾ. ಕೆ.ಎನ್. ಗಣೇಶಯ್ಯ
