Halemane Rajashekara
ಒಡಲುಗೊಂಡವರು
ಒಡಲುಗೊಂಡವರು
Publisher -
- Free Shipping Above ₹400
- Cash on Delivery (COD) Available*
Pages - 196
Type - Paperback
Couldn't load pickup availability
ಕತೆಗಾರ - ವಿಮರ್ಶಕ ಹಳೆಮನೆ ರಾಜಶೇಖರ ಅವರು ತಮ್ಮ ಹೊಸ ಕಾದಂಬರಿಯೊಂದಿಗೆ ಬಂದಿದ್ದಾರೆ. ಸೂಕ್ಷ್ಮ ಸಂವೇದನೆಯ ಕತೆಗಳ ಕಟ್ಟುವಿಕೆಯ ಮೂಲಕ ಪ್ರಿಯರಾಗಿದ್ದ ರಾಜಶೇಖರ ಅವರ ಬರವಣಿಗೆಯ ಕಸುಬುದಾರಿಕೆಯು ಕಾದಂಬರಿಯಲ್ಲಿಯೂ ಮುಂದುವರೆದಿದೆ. ವಚನಕಾರ ದಾಸಿಮಯ್ಯನ ಸಾಲನ್ನು ಶೀರ್ಷಿಕೆ ಆಗಿರಿಸಿಕೊಳ್ಳಲಾದ 'ಒಡಲುಗೊಂಡವರು' ಕಾದಂಬರಿಯು ಕೇವಲ 'ಕತೆ'ಯಾಗಿಲ್ಲ. ಬದಲಿಗೆ ಜ್ವಲಂತ ಬದುಕಿನ ಜೀವಂತ ಚಿತ್ರಣವೇ ಆಗಿ ಅಕ್ಕರದ ರೂಪು ತಾಳಿದೆ.
ಬದುಕಿನ ಬವಣೆಗಳ ದಾರುಣ ಚಿತ್ರ ಕಟ್ಟುವ ಕಾರಣಕ್ಕಾಗಿ ಓದಿಗೆ ಪ್ರಿಯವಾಗುವ ಈ ಕಾದಂಬರಿಯು ಮೊದಲ ಇನ್ನಿಂಗ್ಸ್ ನಲ್ಲಿಯೇ ಸಿಕ್ಸರ್ ಹೊಡೆದ ಹಾಗಿದೆ. ಕತೆಗೆ ಒಬ್ಬ ನಾಯಕನಿದ್ದಾನೆ. ಅವನು ಕೇರಿಯ 'ಭೀಮ' ಬಾಲ್ಯದಲ್ಲಿಯೇ ಸರ್ವಸ್ವವನ್ನು ಕಳೆದುಕೊಂಡ ಗೌಡರ ಮನೆಯ ಆಳು. ಭೀಮನ ಸುತ್ತ ಹೆಣೆಯಲಾದ ಈ ಕತೆಯು ಕೇವಲ ಅವನಿಗಷ್ಟೇ ಸೀಮಿತವಾಗಿಲ್ಲ. ಒಂದು ಹಳ್ಳಿಯ ಏಳು-ಬೀಳಿನ ಹೃದಯಂಗಮ ಚಿತ್ರಣ ನೀಡುತ್ತದೆ. ಬದಲಾಗುತ್ತಿರುವ ಬದುಕಿನ ಸ್ವರೂಪ ಕಳೆದು ಹೋಗುತ್ತಿರುವ ಮೌಲ್ಯಗಳು ಇಲ್ಲವಾಗುತ್ತಿರುವ ನೆಲಜಲ ಸಂಸ್ಕೃತಿ-ಆಧುನಿಕತೆಯ ದಾಳಿಗೆ ನಲುಗುವ ಹಳ್ಳಿಗಳ ಕಥನ ಕಾದಂಬರಿಯ ಕೇಂದ್ರವಾಗಿದೆ. ಬಿಕ್ಕಟ್ಟಿನಿಂದ ಬಿಡುಗಡೆಯ ಕಡೆಗೆ ಚಲಿಸುವ ಕಾದಂಬರಿಯು ಕಂಡುಕೊಂಡ ಹುಡುಕಾಟವು ಬದಲಾವಣೆ ಹೌದು. ಆದರೆ, ಅದು ಬೆಳವಣಿಗೆಯೇನಲ್ಲ. ಪ್ರಕ್ರಿಯೆಯಲ್ಲಿ ನಡೆದ ಅನಾಹುತ-ಹಳಹಳಿಕೆಯ ಹಳವಂಡಗಳ ದಾಖಲೀಕರಣ.
ರಾಯಚೂರು ಸೀಮೆಯ ಕನ್ನಡವನ್ನು ರಾಜಶೇಖರ ದುಡಿಸಿಕೊಂಡ ರೀತಿ ಅನನ್ಯ. ಆಡುಮಾತಿನ ಲಯದ ನಾಡಿ ಹಿಡಿದ ಲೇಖಕರು ತಮ್ಮ ಬಾಲ್ಯದಲ್ಲಿ ಕಂಡು ಅನುಭವಿಸಿದ ಕೃಷಿಲೋಕದ ವಿವರಗಳನ್ನು ಕಂಡರಿಸಿದ ರೀತಿ ಸೊಗಸಾಗಿದೆ. ಭಾಷೆಯ ಬಳಕೆಯಲ್ಲಿ ವಹಿಸುವ ಲೇಖಕರ ಎಚ್ಚರವು ಓದುಗನ ಅರಿವಿನ ವಿಸ್ತಾರಕ್ಕೆ ಕಾರಣವಾಗಿದೆ. ಅಷ್ಟು ಮಾತ್ರವಲ್ಲದೆ, ಈಗಾಗಲೇ ಅಂಚಿಗೆ ಸರಿದುಹೋದ ಹಲವು ವಸ್ತು-ಸಂಗತಿಗಳನ್ನು ಕತೆಯ ಭಾಗವಾಗಿಸಿದ ಕ್ರಮ ಪ್ರಿಯವಾಗದೇ ಇರದು. ಅಪರೂಪದ ವಸ್ತು-ನಿರೂಪಣೆ ಒದಗಿಸಿದ ರಾಜಶೇಖರ ಅಭಿನಂದನೆಗೆ ಅರ್ಹರು ಎಂಬುದರಲ್ಲಿ ಎರಡು ಮಾತಿಲ್ಲ.
- ದೇವು ಪತ್ತಾರ
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.