Dr. T. S. Vivekananda, Sheshagiri Jodidaar
Publisher - ವೀರಲೋಕ ಬುಕ್ಸ್
Regular price
Rs. 625.00
Regular price
Rs. 625.00
Sale price
Rs. 625.00
Unit price
per
- Free Shipping Above ₹200
- Cash on Delivery (COD) Available
Pages - 528
Type - Paperback
...ಒಂದು ಶಾಸ್ತ್ರನಿರ್ಮಾಣಕ್ಕೆ ನೆರವಾಗಬಲ್ಲ ಪದಗಳ ಪ್ರಪಂಚವನ್ನೇ ಪರಿಚಯ ಮಾಡಿಕೊಡುವ 'ಪರಿಸರ ನಿಘಂಟು' ಇದೀಗ ಇಬ್ಬರು ತರುಣ ಮಿತ್ರರ ಸಾಹಸದ ಪರಿಣಾಮವಾಗಿ ಕನ್ನಡದಲ್ಲಿ ಮೊಟ್ಟಮೊದಲಿಗೆ ಸಿದ್ಧವಾಗಿದೆ.
...ಇದು ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಕೇವಲ ಪಾರಿಭಾಷಿಕ ಪದಗಳ ನಿಘಂಟಲ್ಲ; ಒಟ್ಟಾರೆಯಾಗಿ
ಪರಿಸರ ವಿಜ್ಞಾನದ 'ಭಾಷಿಕ ನಿಘಂಟು', ಕನ್ನಡದಲ್ಲಿ ಪರಿಸರ ವಿಜ್ಞಾನವನ್ನು ತಿಳಿದುಕೊಳ್ಳಬೇಕೆನ್ನುವವರಿಗೆ,
ಬರೆಯಬೇಕೆನ್ನುವವರಿಗೆ ಈ ಕುರಿತ ಜಾಗತಿಕ ತಿಳುವಳಿಕೆಯನ್ನು ಹಿಡಿದಿರಿಸಿದ ಭಾಷೆಯನ್ನು ಪರಿಚಯ ಮಾಡಿಕೊಡುವ ನಿಘಂಟು. ಆದ ಕಾರಣವೇ ಈ ನಿಘಂಟುಕಾರರ ಉದ್ದೇಶ, ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಯಾವುದೇ ಪದಕ್ಕೆ ಇರಬಹುದಾದ ಅರ್ಥವನ್ನು ಸೂಚಿಸಿ ವಿರಮಿಸುವಷ್ಟಕ್ಕೆ ಸೀಮಿತವಾಗಿಲ್ಲ..
-ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ
ಡಾ. ಟಿ.ಎಸ್. ವಿವೇಕಾನಂದ..
ಪರಿಸರವಾದವನ್ನು ಸೃಜನಾತ್ಮಕವಾಗಿ ಪುನರಾವಲೋಕನಕ್ಕೊಳಪಡಿಸಿದ ಮಹತ್ವದ ಕೃತಿ 'ಭೂಮಿಗೀತೆ',
ತೇಜಸ್ವಿಯವರೊಂದಿಗೆ ಕೂಡಿ ಮಾಡಿದ 'ಕಿರಿಯರಿಗಾಗಿ ಪರಿಸರ', ಭಾರತದ ವೃಕ್ಷಗಳನ್ನು ಕುರಿತು ನಿರ್ಮಿಸಿದ 'ಹಸಿರ ಕೊಳಲು', ಹಂಪಿ ವಿಶ್ವವಿದ್ಯಾಲಯದ ಡಿ.ಲಿಟ್ ಪದವಿಯನ್ನು ದೊರಕಿಸಿಕೊಟ್ಟ ಅಧ್ಯಯನದ ಪುಸ್ತಕರೂಪ 'ಪರಿಸರ ಕಥನ' ಇವರ ಮಹತ್ವದ ಕೃತಿಗಳಲ್ಲಿ ಕೆಲವು. ಹಲವಾರು ಬಹುಮಾನಿತ ಕಥೆ, ಪದ್ಯಗಳೊಂದಿಗೆ ಜಿಮ್ ಕಾರ್ಬೆಟ್ರ ಇಡೀ ಶಿಕಾರಿ ಕಥೆಗಳ ಕನ್ನಡ ರೂಪಾಂತರ ಇವರ ಹೆಸರಿನಲ್ಲಿದೆ. ಭೂಮಿಗೀತೆ ಕೃತಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಇವರ ಮಹತ್ವಾಕಾಂಕ್ಷೆಯ ಪ್ರಯತ್ನ 'ಪರಿಸರ ನಿಘಂಟು' ಭಾರತೀಯ ಭಾಷೆಗಳಲ್ಲಿಯೇ ಮೊದಲ ಪ್ರಯತ್ನ. ಇದು ಕನ್ನಡದ ಪರಿಸರ ಸಾಹಿತ್ಯದಲ್ಲಿಯೇ ಒಂದು ನಿರ್ಣಾಯಕ ಮೈಲುಗಲ್ಲು ಸಹ ಸಂಪಾದಕರಾದ ಶೇಷಗಿರಿ ಜೋಡಿದಾರ್ ಈ ಪ್ರಯತ್ನದ ಜೊತೆಗಾರ.
-ಪ್ರೊ. ಕಿ.ರಂ. ನಾಗರಾಜ,
...ಇದು ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಕೇವಲ ಪಾರಿಭಾಷಿಕ ಪದಗಳ ನಿಘಂಟಲ್ಲ; ಒಟ್ಟಾರೆಯಾಗಿ
ಪರಿಸರ ವಿಜ್ಞಾನದ 'ಭಾಷಿಕ ನಿಘಂಟು', ಕನ್ನಡದಲ್ಲಿ ಪರಿಸರ ವಿಜ್ಞಾನವನ್ನು ತಿಳಿದುಕೊಳ್ಳಬೇಕೆನ್ನುವವರಿಗೆ,
ಬರೆಯಬೇಕೆನ್ನುವವರಿಗೆ ಈ ಕುರಿತ ಜಾಗತಿಕ ತಿಳುವಳಿಕೆಯನ್ನು ಹಿಡಿದಿರಿಸಿದ ಭಾಷೆಯನ್ನು ಪರಿಚಯ ಮಾಡಿಕೊಡುವ ನಿಘಂಟು. ಆದ ಕಾರಣವೇ ಈ ನಿಘಂಟುಕಾರರ ಉದ್ದೇಶ, ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಯಾವುದೇ ಪದಕ್ಕೆ ಇರಬಹುದಾದ ಅರ್ಥವನ್ನು ಸೂಚಿಸಿ ವಿರಮಿಸುವಷ್ಟಕ್ಕೆ ಸೀಮಿತವಾಗಿಲ್ಲ..
-ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ
ಡಾ. ಟಿ.ಎಸ್. ವಿವೇಕಾನಂದ..
ಪರಿಸರವಾದವನ್ನು ಸೃಜನಾತ್ಮಕವಾಗಿ ಪುನರಾವಲೋಕನಕ್ಕೊಳಪಡಿಸಿದ ಮಹತ್ವದ ಕೃತಿ 'ಭೂಮಿಗೀತೆ',
ತೇಜಸ್ವಿಯವರೊಂದಿಗೆ ಕೂಡಿ ಮಾಡಿದ 'ಕಿರಿಯರಿಗಾಗಿ ಪರಿಸರ', ಭಾರತದ ವೃಕ್ಷಗಳನ್ನು ಕುರಿತು ನಿರ್ಮಿಸಿದ 'ಹಸಿರ ಕೊಳಲು', ಹಂಪಿ ವಿಶ್ವವಿದ್ಯಾಲಯದ ಡಿ.ಲಿಟ್ ಪದವಿಯನ್ನು ದೊರಕಿಸಿಕೊಟ್ಟ ಅಧ್ಯಯನದ ಪುಸ್ತಕರೂಪ 'ಪರಿಸರ ಕಥನ' ಇವರ ಮಹತ್ವದ ಕೃತಿಗಳಲ್ಲಿ ಕೆಲವು. ಹಲವಾರು ಬಹುಮಾನಿತ ಕಥೆ, ಪದ್ಯಗಳೊಂದಿಗೆ ಜಿಮ್ ಕಾರ್ಬೆಟ್ರ ಇಡೀ ಶಿಕಾರಿ ಕಥೆಗಳ ಕನ್ನಡ ರೂಪಾಂತರ ಇವರ ಹೆಸರಿನಲ್ಲಿದೆ. ಭೂಮಿಗೀತೆ ಕೃತಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಇವರ ಮಹತ್ವಾಕಾಂಕ್ಷೆಯ ಪ್ರಯತ್ನ 'ಪರಿಸರ ನಿಘಂಟು' ಭಾರತೀಯ ಭಾಷೆಗಳಲ್ಲಿಯೇ ಮೊದಲ ಪ್ರಯತ್ನ. ಇದು ಕನ್ನಡದ ಪರಿಸರ ಸಾಹಿತ್ಯದಲ್ಲಿಯೇ ಒಂದು ನಿರ್ಣಾಯಕ ಮೈಲುಗಲ್ಲು ಸಹ ಸಂಪಾದಕರಾದ ಶೇಷಗಿರಿ ಜೋಡಿದಾರ್ ಈ ಪ್ರಯತ್ನದ ಜೊತೆಗಾರ.
-ಪ್ರೊ. ಕಿ.ರಂ. ನಾಗರಾಜ,