Indiratanaya
Publisher -
- Free Shipping Above ₹200
- Cash on Delivery (COD) Available
Pages -
Type -
ಇಂದಿರಾತನಯ ಅವರು ಬರೆದಿರುವ ಕಾದಂಬರಿ. ನಮ್ಮ ಇಂದಿನ ಯಾಂತ್ರಿಕ ಜೀವನದಲ್ಲಿ, ನಾಗರಿಕತೆಯ ಹೆಸರಿನಲ್ಲಿ, ವಿಜ್ಞಾನದ ಬೆಳಕಿನಲ್ಲಿ ತರ್ಕಕ್ಕೆ ಸಿಕ್ಕದ ಘಟನೆಗಳು ಅತೀಂದ್ರಿಯ ಲೋಕವೊಂದನ್ನು ಧ್ವನಿಸುತ್ತವೆ. ಮನುಷ್ಯನ ಎಲ್ಲೆಯಿರದ ಮನಃಶಕ್ತಿಯನ್ನು ಮನವರಿಕೆ ಮಾಡಿಕೊಡುವ ಈ ಕೃತಿ ಒಂದು ಅರ್ಥದಲ್ಲಿ ಕಾದಂಬರಿ, ನಿಜ. ಆದರೆ ವ್ಯಾಪಕ ಅರ್ಥದಲ್ಲಿ, ಸಂಕಲ್ಪಶಕ್ತಿಯಿಂದ ಪ್ರೇರಿತವಾದ ಮಾನವ ಮನಸ್ಸಿನ ಸೂಕ್ಷ್ಮಗಳನ್ನು ಆಧಾರಗಳ ಮೂಲಕ ನಿರೂಪಿಸುವ ಅಪೂರ್ವ ಗ್ರಂಥ. ಕನ್ನಡದಲ್ಲಿ ಈ ಬಗೆಯ ಕಾದಂಬರಿಗಳನ್ನು ಮೊಟ್ಟಮೊದಲಿಗೆ ಬರೆದವರು ಇಂದಿರಾತನಯ. ಅತ್ಯಂತ ಕ್ಲಿಷ್ಟವಾದ ಮಂತ್ರತಂತ್ರ ವಿದ್ಯೆಗಳನ್ನು ಸಮಾಜ ಜೀವನದ ಗಾಜಿನ ಮೂಲಕ ಹಾಯಿಸಿ, ಒಂದು ಗಾಢ ಅನುಭವ ಉಂಟಾಗುವಂತೆ ಮಾಡುವ ಅವರ ಬರವಣಿಗೆ ನಮ್ಮ ಸಾಹಿತ್ಯ ಸಂದರ್ಭದಲ್ಲಿ ತೀರ ಅಪರೂಪವಾದದ್ದು.