ಆರ್. ಎಸ್. ರಾಮರಾವ್
Publisher:
Regular price
Rs. 130.00
Regular price
Sale price
Rs. 130.00
Unit price
per
Shipping calculated at checkout.
Couldn't load pickup availability
- ಮುದ್ಧಗೌಡ ಮತ್ತು ಸುಗ್ಗವ್ವೆಗೆ ಸುಮಾರು ೫೦ವರ್ಷಗಳಾದ ಮೇಲೆ ತೇಜಸ್ವಿಯಾದ ಗಂಡು ಮಗುವೊಂದು ಜನಿಸುತ್ತದೆ. ಸಿದ್ಧರಾಮ ಮುದ್ಧಗೌಡ ಮತ್ತು ಸುಗ್ಗವ್ವೆಯರಲ್ಲಿ ತಾರುಣ್ಯದ ರಾಗ-ದ್ವೇಷ, ಕಾಮ-ಕ್ರೋಧಗಳು ವಿಜೃಂಭಿಸುವಾಗ ಹುಟ್ಟದೆ, ಅರಿಷಡ್ವರ್ಗಗಳೆಲ್ಲ ಶರೀರದಲ್ಲಿ ಆರುತ್ತಾ, ಪ್ರೇಮದಿಂದ ಪಕ್ವಗೊಂಡ ಅಪರ ವಯಸ್ಸಿನ ದೇಹದಲ್ಲಿ ಹುಟ್ಟುತ್ತಾನೆ. ಈತನ ಕಾಲ ೧೧೫೦(12ನೇ ಶತಮಾನ)
- ಮಗುವಿಗೆ ತಾಯಿ ಸಿದ್ಧರಾಮನೆಂಬ ಹೆಸರಿಡಬೇಕೆಂದರೆ, ತಂದೆ ಮಗನಿಗೆ 'ಧೂಳಿಮಾಕಾಳ'ನೆಂದು ಹೆಸರಿಡಲು ಆಲೊಚಿಸುತ್ತಾನೆ. ಸಿದ್ಧರಾಮ ಬಾಲ್ಯದಲ್ಲಿ ಮೌನದ ಅಪರಾವತಾರವೇ ಆಗಿದ್ದ. ಅವನೊಳಗಿನ ತೇಜಸ್ಸು 'ತಿಲದೊಳಗಿನ ತೈಲದಂತೆ, ಹಾಲಿನ ಮರೆಯ ತುಪ್ಪದಂತೆ' ಅಂತರಂಗದಲ್ಲಿ ಸುಪ್ತವಾಗಿದ್ದು, ಮೆಲ್ಲ ಮೆಲ್ಲನೆ ಮಾವಿನ ಮರದಡಿಯಲ್ಲಿ ಪಶುಪತಿಯ ಆರಾಧನೆಯೊಂದಿಗೆ ವಿಕಾಸಗೊಳ್ಳುತ್ತಾ ಸಾಗುತ್ತದೆ.
