N.S. Narayana Murthy
ವಿಶ್ವ ಕಂಡ ಧೀಮಂತ ನಾಯಕ ಡಾ. ಬಿಆರ್ ಅಂಬೇಡ್ಕರ್
ವಿಶ್ವ ಕಂಡ ಧೀಮಂತ ನಾಯಕ ಡಾ. ಬಿಆರ್ ಅಂಬೇಡ್ಕರ್
Publisher -
- Free Shipping Above ₹350
- Cash on Delivery (COD) Available*
Pages - 125
Type - Paperback
Couldn't load pickup availability
ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಾದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿ ದಣಿವರಿಯದ ಪ್ರಯತ್ನದ ಫಲವಾಗಿ ದೇಶಕ್ಕೆ ದೀರ್ಘವಾದ ಸಂವಿಧಾನ ರೂಪುಗೊಂಡಿತು. ಇಂತಹ ಭಾರತದ ಸಂವಿಧಾನವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯ ಶ್ರೇಷ್ಠ ಗ್ರಂಥವೆಂದು ಪರಿಗಣಿಸಲಾಗುತ್ತದೆ. ವಿವಿಧ ಭಾಷೆ, ಆಚರಣೆ, ಸಂಸ್ಕೃತಿ ಮತ್ತು ವೈವಿಧ್ಯತೆಗಳನ್ನು ಹೊಂದಿರುವ, 140 ಕೋಟಿಗಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ ಸಂವಿಧಾನವು ಆಚರಣೆಗೆ ಬಂದು ಎಪ್ಪತ್ತೈದು ವರ್ಷಗಳನ್ನು ಪೂರೈಸಿದ್ದರೂ ಯಾವುದೇ ಅರಾಜಕತೆ ಹಾಗೂ ನೆರೆ ರಾಷ್ಟ್ರಗಳಲ್ಲಿ ಕಂಡು ಬರುವ ಸೈನಿಕ ದಂಗೆಗಳಂತಹ ಘಟನೆಗಳು ಸಂಭವಿಸಿಲ್ಲವೆಂದರೆ ಭಾರತ ಸಂವಿಧಾನದ ಗಟ್ಟಿತನವನ್ನು ಅರ್ಥೈಸಿಕೊಳ್ಳಬಹುದಾಗಿದೆ. ಇಂತಹ ಶ್ರೇಷ್ಠವಾದ ಸಂವಿಧಾನವನ್ನು ರೂಪಿಸಲು ನೇತೃತ್ವ ವಹಿಸಿದಂತಹ ಮಹಾನ್ ವ್ಯಕ್ತಿ ಶಕ್ತಿಯನ್ನು ನಾವು ಎಂದೂ ಮರೆಯದೆ ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವೂ ಹೌದು.
Share

Subscribe to our emails
Subscribe to our mailing list for insider news, product launches, and more.